ಮರ ಬಿದ್ದು ಗರ್ಭಿಣಿ ಮತ್ತು ವಿದ್ಯಾರ್ಥಿನಿ ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ.

ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಕುಸಿದು ಅವರ ಮೇಲೆ ಬಿದ್ದಿದೆ. ಈ ಅಪಘಾತದಲ್ಲಿ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಈ ಘಟನೆಯಲ್ಲಿ ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದಂತೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5), ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

1 hour ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

12 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

13 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

14 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

20 hours ago

ಕಾಡು ನೆನಪಾದಾಗ ಕಾಡುವ ತೇಜಸ್ವಿ……

ಪೂರ್ಣ ಚಂದ್ರ ತೇಜಸ್ವಿ............ ಕಾಡು ನೆನಪಾದಾಗ ಕಾಡುವ ತೇಜಸ್ವಿ......... ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ…

1 day ago