ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ.
ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಕುಸಿದು ಅವರ ಮೇಲೆ ಬಿದ್ದಿದೆ. ಈ ಅಪಘಾತದಲ್ಲಿ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.
ಈ ಘಟನೆಯಲ್ಲಿ ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದಂತೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5), ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…