ಮರ ಬಿದ್ದು ಗರ್ಭಿಣಿ ಮತ್ತು ವಿದ್ಯಾರ್ಥಿನಿ ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ.

ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಕುಸಿದು ಅವರ ಮೇಲೆ ಬಿದ್ದಿದೆ. ಈ ಅಪಘಾತದಲ್ಲಿ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಈ ಘಟನೆಯಲ್ಲಿ ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದಂತೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5), ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

5 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

7 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

7 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

9 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

17 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago