ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ.
ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಕುಸಿದು ಅವರ ಮೇಲೆ ಬಿದ್ದಿದೆ. ಈ ಅಪಘಾತದಲ್ಲಿ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.
ಈ ಘಟನೆಯಲ್ಲಿ ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದಂತೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5), ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…