ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ- ಸಚಿವ ಕೆ.ಜೆ.ಜಾರ್ಜ್

ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಮಾತ್ರವಲ್ಲದೆ, ನೆರೆಯ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಿಗೆ ಅನ್ವಯವಾಗುವಂತೆ ಕಾಡಾನೆ ನಿಯಂತ್ರಣಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅನುಪಾಲನಾ ವರದಿಯ ಆಧಾರದ ಮೇಲೆ ಸಭೆ ನಡೆಸುವಂತೆ ಕೆಲವು ಶಾಸಕರು ಸಲಹೆ ನೀಡಿದರು. ಆದರೆ, ವಿಧಾನಪರಿಷತ್‌ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಅವರು ಕಾಡಾನೆಗಳ ಉಪಟಳ ನಿಯಂತ್ರಣ ಕುರಿತಂತೆ ಚರ್ಚೆಗೆ ಮನವಿ ಮಾಡಿದರು. ಅಲ್ಲದೆ, ಪ್ರಮುಖವಾಗಿ ಮೂಡಿಗೆರೆ ತಾಲೂಕಿನಲ್ಲಿ 55 ಕಾಡಾನೆಗಳು ನಾಲ್ಕೈದು ಗುಂಪುಗಳಲ್ಲಿ ಓಡಾಡುತ್ತಿವೆ. ಇವುಗಳಿಂದಾಗಿ ರೈತರು, ಕಾಫಿ ಬೆಳೆಗಾರರಿಗೆ ಅಪಾರ ಹಾನಿಯಾಗಿದೆ. ಜನ ವಸತಿ ಪ್ರದೇಶಕ್ಕೂ ಬಂದು ತೊಂದರೆ ನೀಡುತ್ತಿವೆ ಎಂದು ಪ್ರಾಣೇಶ್ ಹೇಳಿದರು.

ಕಾಡಾನೆಗಳ ಕುರಿತು ಮಾಹಿತಿ ನೀಡಿದ ಚಿಕ್ಕಮಗಳೂರು ಡಿಎಫ್‌ಓ ರಮೇಶ್‌ ಬಾಬು, ಚಿಕ್ಕಮಗಳೂರು ವಲಯದಲ್ಲಿ 35, ಕೊಪ್ಪ ವಲಯದಲ್ಲಿ 125, ಭದ್ರಾ ವನ್ಯಜೀವಿ ವಿಭಾಗದಲ್ಲಿ 400 ಕಾಡಾನೆಗಳು ಇವೆ. ಕಳೆದ 2-3 ವರ್ಷಗಳಿಂದ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮೂಡಿಗೆರೆ ತಾಲೂಕಿಗೆ ಕಾಡಾನೆಗಳ ಹಿಂಡು ಬರುತ್ತಿವೆ.ಪ್ರಸ್ತುತ ನಾಲ್ಕೈದು ಗುಂಪುಗಳು ಓಡಾಡುತ್ತಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಕೆಲವು ಆನೆಗಳಿಗೆ ಕಾಲರ್‌ ಐಡಿ ಹಾಕಲಾಗಿದೆ ಎಂದು ಹೇಳಿದರು.

ಮಧ್ಯೆಪ್ರವೇಶಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಡಾನೆಗಳಿಗೆ ಕಾಡಿನಲ್ಲಿಯೇ ಬೇಕಾಗುವಷ್ಟು ಆಹಾರ ಸಿಕ್ಕಿದರೆ ಅವುಗಳು ಜನ ವಸತಿ ಪ್ರದೇಶಕ್ಕೆ ಬರುವುದಿಲ್ಲ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿ ಕಾರ್ಯ ಯೋಜನೆ ರೂಪಿಸಬೇಕು ಎಂದು ಸಲಹೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಕಾಡಿನಿಂದ ಜನವಸತಿ ಪ್ರದೇಶಗಳು ಮತ್ತು ಕೃಷಿ ಜಮೀನುಗಳಿಗೆ ಬರುವ ಕಾಡಾನೆಗಳನ್ನು ಹಿಮ್ಮೆಟ್ಟುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಸೆರೆ ಸಿಕ್ಕ ಆನೆಗಳನ್ನು ಬಿಡಾರಕ್ಕೆ ಬಿಡಲು ಭದ್ರಾ ವನ್ಯಜೀವಿ ವಿಭಾಗದಲ್ಲಿ ಆನೆಗಳ ಧಾಮವನ್ನು ನಿರ್ಮಾಣ ಮಾಡು ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಈ ವೇಳೆ ಶಾಸಕಿ ನಯನಾ ಮೋಟಮ್ಮ ಮಧ್ಯೆಪ್ರವೇಶಿಸಿ, ಸ್ಥಳೀಯವಾಗಿ ಓಡಾಡುತ್ತಿರುವ ಆನೆಗಳಿಂದ ಜನರಿಗೆ ಯಾವುದೇ ತೊಂದರೆ ಆಗುತ್ತಿಲ್ಲ, ಹಾಸನ ಜಿಲ್ಲೆಯಿಂದ ಹಿಂಡು ಹಿಂಡಾಗಿ ಬರುತ್ತಿರುವ ಆನೆಗಳಿಂದ ತೊಂದರೆಯಾಗುತ್ತಿದೆ ಎಂದಾಗ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ದನಿಗೂಡಿಸಿ, ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾದರೆ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಆನೆಗಳಿಗೆ ಕಾಡಿನಲ್ಲಿ ಆಹಾರ ಸಿಗುತ್ತಿಲ್ಲ. ಹಣ್ಣಿನ ಮರಗಳು ಹಾಗೂ ಬಿದಿರು ಬೆಳೆಸಬೇಕು ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಹೇಳಿದಾಗ, ಈ ವರ್ಷ 30 ಸಾವಿರ ಬಿದಿರು ಸಸಿಗಳನ್ನು ನಡೆಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಡಿಎಫ್‌ಓ ರಮೇಶ್‌ ಬಾಬು ಹೇಳಿದರು.

ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಸಚಿವ ಕೆ.ಜೆ. ಜಾರ್ಜ್‌ ಅವರು, ಆನೆಗಳು ನಾಡಿಗೆ ನುಗ್ಗುವುದನ್ನು ನಿಯಂತ್ರಿಸುವ ಸಂಬಂಧ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದಾದ ಬಳಿಕ ಅನುಪಾಲನಾ ವರದಿ ಆಧಾರದ ಮೇಲೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಕೆ.ಎಸ್‌.ಆನಂದ್‌, ಶ್ರೀನಿವಾಸ್‌, ಎಚ್‌.ಡಿ.ತಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ.ರೇವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹಾಗೂ ಜಿಪಂ ಮುಕ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌. ಕೀರ್ತನಾ ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago