ಮಲೆನಾಡಿನ ಜನರ ಆರೋಗ್ಯ ಕಾಪಾಡಲು ಹೊರ ರೋಗಿಗಳ ನೂತನ ಕಟ್ಟಡ ನಿರ್ಮಾಣ- ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್

ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಜಿಲ್ಲಾಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ   ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಉದ್ಘಾಟನೆ ನೆರವೇರಿಸಿ ಅವರು ಹೇಳಿದರು.

ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು. ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ. ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

16 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago