ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಜಿಲ್ಲಾಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಉದ್ಘಾಟನೆ ನೆರವೇರಿಸಿ ಅವರು ಹೇಳಿದರು.
ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು. ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ. ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…