ಮಲೆನಾಡಿನ ಜನರ ಆರೋಗ್ಯ ಕಾಪಾಡಲು ಹೊರ ರೋಗಿಗಳ ನೂತನ ಕಟ್ಟಡ ನಿರ್ಮಾಣ- ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್

ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಜಿಲ್ಲಾಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ   ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಉದ್ಘಾಟನೆ ನೆರವೇರಿಸಿ ಅವರು ಹೇಳಿದರು.

ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು. ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ. ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

9 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

12 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

12 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

14 hours ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

15 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

15 hours ago