ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಸೇರಿದಂತೆ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದ್ದು,
ಸದ್ಯ ಅರಣ್ಯ ಇಲಾಖೆ ತನಿಖೆ ಚುರುಕುಗೊಳಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದು, ವರದಿಗಾಗಿ ತನಿಖಾ ತಂಡವನ್ನು ರಚಿಸಲಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿ.
ಹುಲಿ ಸಂರಕ್ಷಣೆಗೆ ಕರ್ನಾಟಕ ಹೆಸರುವಾಸಿಯಾಗಿದೆ. ಈ ಕಾರಣದಿಂದ ದೇಶದಲ್ಲೇ ಅತಿಹೆಚ್ಚು ಹುಲಿಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಕೂಡಲೇ ಹುಲಿಗಳ ಅಸಹಜ ಸಾವಿನ ಕುರಿತು ತನಿಖೆ ನಡೆಸಬೇಕು ಮತ್ತು ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
View Comments
ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )
ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )