ವೈಟ್ ಫಿಲ್ಡ್ ನಲ್ಲಿರೋ SMRITI MOTORS, SALES & SERVICE ಮಲ್ಟಿ ಬ್ರ್ಯಾಂಡ್ ಬೈಕ್ ಶೋರೂಂ ಮಾಲೀಕನಿಂದ ವಂಚನೆ ಆಗಿದೆ ಎಂದು ಗ್ರಾಹಕರು ದೂರಿದ್ದಾರೆ.
ಕಸ್ಟಮರ್ ಗಳಿಂದ ಲಕ್ಷಗಟ್ಟಲೇ ಅಡ್ವಾನ್ಸ್ ಹಣ ಪಡೆದು ಬೈಕ್ ನೀಡದೇ ಬೈಕ್ ಶೋರೂಂ ಮಾಲೀಕ ವಿಜಯ್ ಕುಮಾರ್ ಸದ್ಯ ಎಸ್ಕೇಪ್ ಆಗಿದ್ದಾನೆ.
ಫುಲ್ ಕ್ಯಾಷ್ ಕಟ್ಟಿರುವವರಿಗೆ ಗೊತ್ತೆ ಆಗದಂತೆ EMIಗೆ ಕನ್ವರ್ಟ್ ಮಾಡಿದ್ದ ಮಾಲೀಕ. ಕೆಲವರಿಗಂತು ಸಿಂಗಲ್ EMI ಗೆ ಡಬಲ್ EMI ಕಟ್ಟುವಂತ ಸ್ಥಿತಿ ತಂದಿಟ್ಟಿದ್ದಾನೆ. ಕೆಲವರಿಗೆ NOC ಕೊಡಿಸುತ್ತೇನೆ ಎಂದು ಮತ್ತೆ EMI ಆಕ್ಟಿವ್ ಮಾಡಿರುವ ಭೂಪ. ಹಳೇ ಲೋನ್ ಜೊತೆ ಖರೀದಿ ಮಾಡದ ಬೈಕ್ ಗೂ ಲೋನ್ ಕಟ್ಟುತ್ತಿರುವ ಕೆಲ ಗ್ರಾಹಕರು. ಕಸ್ಟಮರ್ ಗಳ ಬ್ಯಾಂಕ್ ಡಿಟೇಲ್ಸ್ ಪಡೆದು ವಂಚನೆ ಮಾಡುತ್ತಿದ್ದ ವಿಜಯ್ ಕುಮಾರ್.
ಲೋನ್ ಕೊಡುವ ಬ್ಯಾಂಕ್ & ಫೈನಾನ್ಸ್ ಕಂಪನಿಗಳ ಜೊತೆ ಸೇರಿ ಈ ರೀತಿ ವಂಚಿಸಿರೋ ಶಂಕೆ ವ್ಯಕ್ತವಾಗಿದೆ. ವಿಜಯ್ ಕುಮಾರ್ ತಂದಿಟ್ಟ ಪಜೀತಿಗೆ ಕಸ್ಟಮರ್ ಗಳು ಕಂಗಾಲಾಗಿದ್ದಾರೆ. ಪ್ರತಿ ತಿಂಗಳು EMI ಹಣ ಕಟ್ಟುವಂತೆ ಫೈನಾನ್ಸ್ ಕಂಪನಿಗಳು ಕಸ್ಟಮರ್ ಗಳ ಬೆನ್ನತ್ತಿವೆ.
ಸದ್ಯ 21 ಜನರಿಂದ ವೈಟ್ ಫೀಲ್ಡ್ ಠಾಣೆಯಲ್ಲಿ ದೂರಿನ ಆಧಾರದ ಮೇಲೆ ಬೈಕ್ ಶೋರೂಂ ಮಾಲೀಕನ ವಿರುದ್ಧ FIR ದಾಖಲಾಗಿದೆ.
ಇನ್ನೂ ಪತಿ ಕಾಣೆಯಾಗಿದ್ದಾರೆ ಅಂತ 1 ತಿಂಗಳ ಹಿಂದೆ ವೈಟ್ ಫಿಲ್ಡ್ ಠಾಣೆಗೆ ದೂರು ನೀಡಿರುವ ಪತ್ನಿ. ಈ ಹಿನ್ನೆಲೆ ವಿಜಯ್ಕುಮಾರ್ ಮತ್ತು ಇನ್ನೊಬ್ಬ ಪಾರ್ಟರ್ನ್ ಕಿಶೋರ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…