ವೈಟ್ ಫಿಲ್ಡ್ ನಲ್ಲಿರೋ SMRITI MOTORS, SALES & SERVICE ಮಲ್ಟಿ ಬ್ರ್ಯಾಂಡ್ ಬೈಕ್ ಶೋರೂಂ ಮಾಲೀಕನಿಂದ ವಂಚನೆ ಆಗಿದೆ ಎಂದು ಗ್ರಾಹಕರು ದೂರಿದ್ದಾರೆ.
ಕಸ್ಟಮರ್ ಗಳಿಂದ ಲಕ್ಷಗಟ್ಟಲೇ ಅಡ್ವಾನ್ಸ್ ಹಣ ಪಡೆದು ಬೈಕ್ ನೀಡದೇ ಬೈಕ್ ಶೋರೂಂ ಮಾಲೀಕ ವಿಜಯ್ ಕುಮಾರ್ ಸದ್ಯ ಎಸ್ಕೇಪ್ ಆಗಿದ್ದಾನೆ.
ಫುಲ್ ಕ್ಯಾಷ್ ಕಟ್ಟಿರುವವರಿಗೆ ಗೊತ್ತೆ ಆಗದಂತೆ EMIಗೆ ಕನ್ವರ್ಟ್ ಮಾಡಿದ್ದ ಮಾಲೀಕ. ಕೆಲವರಿಗಂತು ಸಿಂಗಲ್ EMI ಗೆ ಡಬಲ್ EMI ಕಟ್ಟುವಂತ ಸ್ಥಿತಿ ತಂದಿಟ್ಟಿದ್ದಾನೆ. ಕೆಲವರಿಗೆ NOC ಕೊಡಿಸುತ್ತೇನೆ ಎಂದು ಮತ್ತೆ EMI ಆಕ್ಟಿವ್ ಮಾಡಿರುವ ಭೂಪ. ಹಳೇ ಲೋನ್ ಜೊತೆ ಖರೀದಿ ಮಾಡದ ಬೈಕ್ ಗೂ ಲೋನ್ ಕಟ್ಟುತ್ತಿರುವ ಕೆಲ ಗ್ರಾಹಕರು. ಕಸ್ಟಮರ್ ಗಳ ಬ್ಯಾಂಕ್ ಡಿಟೇಲ್ಸ್ ಪಡೆದು ವಂಚನೆ ಮಾಡುತ್ತಿದ್ದ ವಿಜಯ್ ಕುಮಾರ್.
ಲೋನ್ ಕೊಡುವ ಬ್ಯಾಂಕ್ & ಫೈನಾನ್ಸ್ ಕಂಪನಿಗಳ ಜೊತೆ ಸೇರಿ ಈ ರೀತಿ ವಂಚಿಸಿರೋ ಶಂಕೆ ವ್ಯಕ್ತವಾಗಿದೆ. ವಿಜಯ್ ಕುಮಾರ್ ತಂದಿಟ್ಟ ಪಜೀತಿಗೆ ಕಸ್ಟಮರ್ ಗಳು ಕಂಗಾಲಾಗಿದ್ದಾರೆ. ಪ್ರತಿ ತಿಂಗಳು EMI ಹಣ ಕಟ್ಟುವಂತೆ ಫೈನಾನ್ಸ್ ಕಂಪನಿಗಳು ಕಸ್ಟಮರ್ ಗಳ ಬೆನ್ನತ್ತಿವೆ.
ಸದ್ಯ 21 ಜನರಿಂದ ವೈಟ್ ಫೀಲ್ಡ್ ಠಾಣೆಯಲ್ಲಿ ದೂರಿನ ಆಧಾರದ ಮೇಲೆ ಬೈಕ್ ಶೋರೂಂ ಮಾಲೀಕನ ವಿರುದ್ಧ FIR ದಾಖಲಾಗಿದೆ.
ಇನ್ನೂ ಪತಿ ಕಾಣೆಯಾಗಿದ್ದಾರೆ ಅಂತ 1 ತಿಂಗಳ ಹಿಂದೆ ವೈಟ್ ಫಿಲ್ಡ್ ಠಾಣೆಗೆ ದೂರು ನೀಡಿರುವ ಪತ್ನಿ. ಈ ಹಿನ್ನೆಲೆ ವಿಜಯ್ಕುಮಾರ್ ಮತ್ತು ಇನ್ನೊಬ್ಬ ಪಾರ್ಟರ್ನ್ ಕಿಶೋರ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…