ವೈಟ್ ಫಿಲ್ಡ್ ನಲ್ಲಿರೋ SMRITI MOTORS, SALES & SERVICE ಮಲ್ಟಿ ಬ್ರ್ಯಾಂಡ್ ಬೈಕ್ ಶೋರೂಂ ಮಾಲೀಕನಿಂದ ವಂಚನೆ ಆಗಿದೆ ಎಂದು ಗ್ರಾಹಕರು ದೂರಿದ್ದಾರೆ.
ಕಸ್ಟಮರ್ ಗಳಿಂದ ಲಕ್ಷಗಟ್ಟಲೇ ಅಡ್ವಾನ್ಸ್ ಹಣ ಪಡೆದು ಬೈಕ್ ನೀಡದೇ ಬೈಕ್ ಶೋರೂಂ ಮಾಲೀಕ ವಿಜಯ್ ಕುಮಾರ್ ಸದ್ಯ ಎಸ್ಕೇಪ್ ಆಗಿದ್ದಾನೆ.
ಫುಲ್ ಕ್ಯಾಷ್ ಕಟ್ಟಿರುವವರಿಗೆ ಗೊತ್ತೆ ಆಗದಂತೆ EMIಗೆ ಕನ್ವರ್ಟ್ ಮಾಡಿದ್ದ ಮಾಲೀಕ. ಕೆಲವರಿಗಂತು ಸಿಂಗಲ್ EMI ಗೆ ಡಬಲ್ EMI ಕಟ್ಟುವಂತ ಸ್ಥಿತಿ ತಂದಿಟ್ಟಿದ್ದಾನೆ. ಕೆಲವರಿಗೆ NOC ಕೊಡಿಸುತ್ತೇನೆ ಎಂದು ಮತ್ತೆ EMI ಆಕ್ಟಿವ್ ಮಾಡಿರುವ ಭೂಪ. ಹಳೇ ಲೋನ್ ಜೊತೆ ಖರೀದಿ ಮಾಡದ ಬೈಕ್ ಗೂ ಲೋನ್ ಕಟ್ಟುತ್ತಿರುವ ಕೆಲ ಗ್ರಾಹಕರು. ಕಸ್ಟಮರ್ ಗಳ ಬ್ಯಾಂಕ್ ಡಿಟೇಲ್ಸ್ ಪಡೆದು ವಂಚನೆ ಮಾಡುತ್ತಿದ್ದ ವಿಜಯ್ ಕುಮಾರ್.
ಲೋನ್ ಕೊಡುವ ಬ್ಯಾಂಕ್ & ಫೈನಾನ್ಸ್ ಕಂಪನಿಗಳ ಜೊತೆ ಸೇರಿ ಈ ರೀತಿ ವಂಚಿಸಿರೋ ಶಂಕೆ ವ್ಯಕ್ತವಾಗಿದೆ. ವಿಜಯ್ ಕುಮಾರ್ ತಂದಿಟ್ಟ ಪಜೀತಿಗೆ ಕಸ್ಟಮರ್ ಗಳು ಕಂಗಾಲಾಗಿದ್ದಾರೆ. ಪ್ರತಿ ತಿಂಗಳು EMI ಹಣ ಕಟ್ಟುವಂತೆ ಫೈನಾನ್ಸ್ ಕಂಪನಿಗಳು ಕಸ್ಟಮರ್ ಗಳ ಬೆನ್ನತ್ತಿವೆ.
ಸದ್ಯ 21 ಜನರಿಂದ ವೈಟ್ ಫೀಲ್ಡ್ ಠಾಣೆಯಲ್ಲಿ ದೂರಿನ ಆಧಾರದ ಮೇಲೆ ಬೈಕ್ ಶೋರೂಂ ಮಾಲೀಕನ ವಿರುದ್ಧ FIR ದಾಖಲಾಗಿದೆ.
ಇನ್ನೂ ಪತಿ ಕಾಣೆಯಾಗಿದ್ದಾರೆ ಅಂತ 1 ತಿಂಗಳ ಹಿಂದೆ ವೈಟ್ ಫಿಲ್ಡ್ ಠಾಣೆಗೆ ದೂರು ನೀಡಿರುವ ಪತ್ನಿ. ಈ ಹಿನ್ನೆಲೆ ವಿಜಯ್ಕುಮಾರ್ ಮತ್ತು ಇನ್ನೊಬ್ಬ ಪಾರ್ಟರ್ನ್ ಕಿಶೋರ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…