ಮಳೆಗಾಗಿ ಉದ್ಭವ ಬಸವಣ್ಣ ಮೂರ್ತಿಗೆ ವಿಶೇಷ ಪೂಜೆ: 101 ಈಡುಗಾಗಿ ಹೊಡೆದು ವರುಣ ದೇವರ ಮೊರೆ ಹೋದ ಗ್ರಾಮಸ್ಥರು

 

ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.

ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.

ಇದೀಗ ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದರು.

ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಭವ ಬಸವಣ್ಣ ಮೂರ್ತಿಗೆ ಶ್ರದ್ಧಾಭಕ್ತಿಯಿಂದ ಹೂವಿನ ಅಲಂಕಾರ, ಕ್ಷೀರಾಭಿಷೇಕ ಮಾಡಲಾಯಿತು. ನಂತರ ನೆರೆದಿದ್ದ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago