ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.
ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.
ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.
ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…