ಮಳೆಗಾಗಿ ಉದ್ಭವ ಬಸವಣ್ಣ ಮೂರ್ತಿಗೆ ವಿಶೇಷ ಪೂಜೆ: 101 ಈಡುಗಾಗಿ ಹೊಡೆದು ವರುಣ ದೇವರ ಮೊರೆ ಹೋದ ಗ್ರಾಮಸ್ಥರು

 

ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.

ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.

ಇದೀಗ ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದರು.

ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಭವ ಬಸವಣ್ಣ ಮೂರ್ತಿಗೆ ಶ್ರದ್ಧಾಭಕ್ತಿಯಿಂದ ಹೂವಿನ ಅಲಂಕಾರ, ಕ್ಷೀರಾಭಿಷೇಕ ಮಾಡಲಾಯಿತು. ನಂತರ ನೆರೆದಿದ್ದ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

57 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago