ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.
ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.
ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.
ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…