ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.
ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.
ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.
ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…