ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.
ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.
ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.
ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…