ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.
ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.
ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.
ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…