ಮಳೆಗಾಗಿ ಉದ್ಭವ ಬಸವಣ್ಣ ಮೂರ್ತಿಗೆ ವಿಶೇಷ ಪೂಜೆ: 101 ಈಡುಗಾಗಿ ಹೊಡೆದು ವರುಣ ದೇವರ ಮೊರೆ ಹೋದ ಗ್ರಾಮಸ್ಥರು

 

ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.

ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.

ಇದೀಗ ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದರು.

ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಭವ ಬಸವಣ್ಣ ಮೂರ್ತಿಗೆ ಶ್ರದ್ಧಾಭಕ್ತಿಯಿಂದ ಹೂವಿನ ಅಲಂಕಾರ, ಕ್ಷೀರಾಭಿಷೇಕ ಮಾಡಲಾಯಿತು. ನಂತರ ನೆರೆದಿದ್ದ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

18 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

19 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago