ಮಳೆಗಾಗಿ ಉದ್ಭವ ಬಸವಣ್ಣ ಮೂರ್ತಿಗೆ ವಿಶೇಷ ಪೂಜೆ: 101 ಈಡುಗಾಗಿ ಹೊಡೆದು ವರುಣ ದೇವರ ಮೊರೆ ಹೋದ ಗ್ರಾಮಸ್ಥರು

 

ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ ಬೆಳೆಗಳಿಗೆ ಹಾಗೂ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ.

ಹೀಗಾಗಿ ಮಳೆಗಾಗಿ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಪೂಜೆ- ಪುನಸ್ಕಾರಗಳ ಮೊರೆ ಹೋಗುತ್ತಿದ್ದಾರೆ. ಭಾನುವಾರ ತೂಬಗೆರೆ ಹೋಬಳಿಯ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ವಧು-ವರ ಪೋಷಾಕು ಧರಿಸಿ ಚಂದಮಾಮ ಮದುವೆ ಮಾಡಿಸಿದ್ದರು.

ಇದೀಗ ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದರು.

ಈ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಮ್ಮೂರಿನ ಪೂಜಾರಿಯ ಕನಸ್ಸಿನಲ್ಲಿ ದೇವರು ಬಂದು ಇಲ್ಲಿ ಬಸವಣ್ಣ ಇದೆ ಅಂತಾ ಹೇಳಿದ್ದರು. ಉತ್ತಮ ಮಳೆ ಬೆಳೆಗಾಗಿ ಇಲ್ಲಿ ಬಸವಣ್ಣ ಇದೆ ಪೂಜಿಸಿ ಎಂದು ಹೇಳಿದ್ದರು ಎಂಬ ಪ್ರತೀತಿ ಇದೆ. ಅಂದಿನಿಂದಲೂ ನಮ್ಮ ಪೂರ್ವಿಕರು ಊರಿನ ಗ್ರಾಮಸ್ಥರಿಂದ ಧವಸ ಧಾನ್ಯಗಳನ್ನ ಸಂಗ್ರಹಿಸಿ ಇಲ್ಲಿಯೆ ಅಡುಗೆ ತಯಾರಿ ಮಾಡಿ ಮಳೆಗಾಗಿ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಭವ ಬಸವಣ್ಣ ಮೂರ್ತಿಗೆ ಶ್ರದ್ಧಾಭಕ್ತಿಯಿಂದ ಹೂವಿನ ಅಲಂಕಾರ, ಕ್ಷೀರಾಭಿಷೇಕ ಮಾಡಲಾಯಿತು. ನಂತರ ನೆರೆದಿದ್ದ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಹೊಸಹಳ್ಳಿ ಗ್ರಾ.ಪಂ ಸದಸ್ಯ ಆನಂದ್, ಪೂಜಾರಿ ಸಿದ್ದಪ್ಪ, ಹೊಸಹಳ್ಳಿ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ ಶಾಂತಕುಮಾರ್, ಗ್ರಾಮದ ಮುಖಂಡರಾದ ನಾಗೇಶ್, ರವಿಕುಮಾರ್, ಸತೀಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

5 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

8 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago