ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ ಮಳೆಯಿಲ್ಲದೆ ಬರದ ಆತಂಕದಲ್ಲಿದ್ದ ರೈತರು, ಈಗ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಕಾರ್ಯ ಆರಂಭಿಸಲು ಸಾಧ್ಯವಾಗದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆ ಬಂದರೂ ಕೃಷಿ ಚಟುವಟಿಕೆಗಳು ಆರಂಭವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನ್ನದಾತನ ಆತಂಕ ಮತ್ತಷ್ಟು ಹೆಚ್ಚಿಸಿದೆ.

ಕಳೆದ ಕೆಲವು ವಾರಗಳವರೆಗೆ ಮಳೆಯ ಕೊರತೆಯಿಂದ ಹೊಲಗಳು ಒಣಗಿದ್ದವು. ಪರಿಣಾಮವಾಗಿ ಬಿತ್ತನೆ ಕಾರ್ಯವನ್ನು ಮುಂದೂಡಿದ್ದ ರೈತರು, ಇತ್ತೀಚೆಗೆ ಮಳೆ ಆರಂಭವಾಗುತ್ತಿದ್ದಂತೆ ಬೀಜ, ಗೊಬ್ಬರ ಖರೀದಿಸಿ ಕೃಷಿ ಕಾರ್ಯಗಳಿಗೆ ಸಜ್ಜಾಗಿದ್ದರು. ಆದರೆ ನಿರಂತರ ಮಳೆಯಿಂದ ಹೊಲಗಳಲ್ಲಿ ನೀರು ನಿಂತಿರುವುದರಿಂದ ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ಕೃಷಿ ಯಂತ್ರೋಪಕರಣಗಳನ್ನು ಹೊಲಕ್ಕೆ ಇಳಿಸಲು ಸಾಧ್ಯವಾಗುತ್ತಿಲ್ಲ.

ಮಳೆ ವಿರಾಮ ನೀಡದ ಕಾರಣ ಉಳುಮೆ, ಬಿತ್ತನೆ ಸೇರಿದಂತೆ ಆರಂಭಿಕ ಕೃಷಿ ಚಟುವಟಿಕೆಗಳು ಸಂಪೂರ್ಣ ಅಸ್ತವ್ಯಸ್ತಗೊಂಡಿವೆ. ಈಗಾಗಲೇ ವಿಳಂಬವಾಗಿರುವ ಬಿತ್ತನೆ ಮತ್ತಷ್ಟು ತಡವಾದರೆ ಬೆಳೆಗಳ ಬೆಳವಣಿಗೆ ಮತ್ತು ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ದೊಡ್ಡಬಳ್ಳಾಪುರ ಭಾಗದಲ್ಲಿ ಮುಖ್ಯವಾಗಿ ಬೆಳೆಯಲಾಗುವ ರಾಗಿ, ಜೋಳ, ತೊಗರಿ ಸೇರಿದಂತೆ ಮಳೆ ಆಶ್ರಿತ ಬೆಳೆಗಳ ಬಿತ್ತನೆಗೆ ಇದು ಅತ್ಯಂತ ಮಹತ್ವದ ಅವಧಿಯಾಗಿದೆ. ಆದರೆ ನಿರಂತರ ಮಳೆಯಿಂದ ಹೊಲಗಳಲ್ಲಿ ನೀರು ನಿಂತಿರುವುದರಿಂದ ರೈತರು ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ. ಸರಿಯಾದ ಸಮಯದಲ್ಲಿ ಬಿತ್ತನೆ ಆಗದಿದ್ದರೆ ಬೆಳೆಯ ಬೆಳವಣಿಗೆ ಕುಂಠಿತವಾಗುವ ಜೊತೆಗೆ ಉತ್ಪಾದನೆ ಕಡಿಮೆಯಾಗುವ ಭೀತಿ ಎದುರಾಗಿದೆ.

ಕೃಷಿ ತಜ್ಞರ ಅಭಿಪ್ರಾಯದಂತೆ, ಮಳೆಯ ನಡುವೆ ಕೆಲ ದಿನಗಳ ಕಾಲ ವಿರಾಮ ದೊರೆತರೆ ಮಾತ್ರ ಹೊಲದ ತೇವಾಂಶ ಸಮತೋಲನಕ್ಕೆ ಬಂದು ಬಿತ್ತನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಇಲ್ಲದಿದ್ದರೆ ಬಿತ್ತನೆ ಅವಧಿ ಮತ್ತಷ್ಟು ಕುಗ್ಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆಯಿದೆ.

ಒಂದೆಡೆ ಮಳೆ ಕೊರತೆಯಿಂದ ಬರದ ಭೀತಿ, ಮತ್ತೊಂದೆಡೆ ಅತಿಯಾದ ಮಳೆಯಿಂದ ಬಿತ್ತನೆ ವಿಳಂಬ. ಪ್ರಕೃತಿಯ ಈ ವೈಪರೀತ್ಯಗಳ ನಡುವೆ ಅನ್ನದಾತ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾನೆ. ಈಗಾದರೂ ಮಳೆ ಕೆಲ ದಿನಗಳ ಕಾಲ ವಿರಾಮ ನೀಡಿದರೆ ಮಾತ್ರ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುವ ನಿರೀಕ್ಷೆ ರೈತರದ್ದಾಗಿದೆ.

ಇಷ್ಟು ದಿನ ಮಳೆಯೇ ಇರಲಿಲ್ಲ. ಈಗ ಮಳೆ ಶುರುವಾದ ಮೇಲೆ ಒಂದೇ ಸಮನೆ ಸುರಿಯುತ್ತಿದೆ. ಹೊಲಕ್ಕೆ ಇಳಿದು ಬಿತ್ತನೆ ಮಾಡಲು ಅವಕಾಶವೇ ಸಿಗುತ್ತಿಲ್ಲ. ಇದೇ ರೀತಿ ಮಳೆ ಮುಂದುವರಿದರೆ ಬಿತ್ತನೆ ಮತ್ತಷ್ಟು ತಡವಾಗಿ ಬೆಳೆಗೂ ಹೊಡೆತ ಬೀಳಲಿದೆ ಎಂದು ರೈತ ಗಂಗರಾಜು ಹೇಳಿದ್ದಾರೆ.

ಬಿತ್ತನೆ ಕಾರ್ಯ ಈಗಾಗಲೇ ತಡವಾಗಿದೆ. ಹೀಗಾಗಿ ರೈತರು ಅಲ್ಪಾವಧಿಯ ಬೆಳೆಗಳತ್ತ ಗಮನಹರಿಸುವುದು ಸೂಕ್ತ. ಹವಾಮಾನ ಮುನ್ಸೂಚನೆಗಳ ಪ್ರಕಾರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಎಲ್ ನಿನೋದಿಂದ ಲಾ ನಿನಾಗೆ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ನಂತರ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ರೈತರು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಇಲಾಖೆಯ ಸಲಹೆ ಪಡೆದು ಬೆಳೆ ಆಯ್ಕೆ ಮಾಡಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ (ಬೇಸಾಯ ಶಾಸ್ತ್ರ) ಡಾ. ನಿಂಗರಾಜು ಜಿ.ಕೆ ತಿಳಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

18 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

20 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago