ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.
ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.
ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…