ಮಳೆಗಾಗಿ ಗಂಡು ಮಕ್ಕಳಿಬ್ಬರಿಗೆ ಮದುವೆ ಮಾಡಿ ಮಳೆರಾಯನ ಮೊರೆ ಹೋದ ಗ್ರಾಮಸ್ಥರು

ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ  ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.

ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ‌ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.

ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

10 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago