ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.
ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.
ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…