ಮಳೆಗಾಗಿ ಗಂಡು ಮಕ್ಕಳಿಬ್ಬರಿಗೆ ಮದುವೆ ಮಾಡಿ ಮಳೆರಾಯನ ಮೊರೆ ಹೋದ ಗ್ರಾಮಸ್ಥರು

ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ  ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.

ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ‌ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.

ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

4 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

6 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

18 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

19 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

19 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago