ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.
ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.
ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…