ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.
ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.
ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…