ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.

ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.

ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.

ನಂತರ ಎಲ್ಲಾ ಗ್ರಾಮಸ್ಥರು ಒಂದೆಡೆ‌ ಸೇರಿ ಕಲೆತು ಮಳೆರಾಯನ ಕುರಿತು ಹಾಡುಗಳನ್ನು ಹಾಡಿದರು. ನೃತ್ಯ ಮಾಡಿ ಈಗಲೇ ಬಾರೋ ಮಳೆರಾಯ ಎಂದು ಕರೆದಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

27 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago