ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

 

ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.

ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.

ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು. ನಂತರ ಎಲ್ಲಾ ಗ್ರಾಮಸ್ಥರು ಒಂದೆಡೆ‌ ಸೇರಿ ಕಲೆತು ಮಳೆರಾಯನ ಕುರಿತು ಹಾಡುಗಳನ್ನು ಹಾಡಿದರು. ನೃತ್ಯ ಮಾಡಿ ಈಗಲೇ ಬಾರೋ ಮಳೆರಾಯ ಎಂದು ಕರೆದಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

21 minutes ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

12 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

13 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

15 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

17 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

19 hours ago