ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…