ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…