ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…