ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು. ಮುಂಗಾರು ಪ್ರಾರಂಭವಾದ ಕೂಡಲೇ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು.
ಆದರೆ ಪ್ರಸ್ತುತ ವರ್ಷ ಮುಂಗಾರು ಮಳೆ ತಡವಾಗಿ ಆರಂಭವಾಗಿ, ಅತಿವೃಷ್ಟಿ ಸೃಷ್ಟಿಸಿದೆ. ಇದರಿಂದ ಮುಂಗಾರುನಲ್ಲಿ ಸೂಕ್ತ ರೀತಿಯಲ್ಲಿ ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ನಿಧಾನಗತಿಯಲ್ಲೇ ಸಾಗಿದ್ದವು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಮಳೆ ಆಗಿದ್ದರಿಂದ ಬೀಜ ಬಿತ್ತಿದ್ದ ರೈತರಿಗೆ ಇದೀಗ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲೇ ರೈತನ ಕಣ್ಮುಂದೆಯೇ ಬಾಡಿಹೋಗುತ್ತಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೇ ಸೊರಗುತ್ತಿವೆ. ಕೆರೆ ಕುಂಟೆಗಳಿ ಬರಿದಾಗುತ್ತಿವೆ.
ಮೇ-ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ 363.3 ಮಿ.ಮೀ ಮಳೆ
ತಾಲೂಕಿನಲ್ಲಿ ಮೇ ತಿಂಗಳಿಂದ ಆಗಸ್ಟ್ ಎರಡನೇ ವಾರದ ಅಂತ್ಯದವರೆಗೆ 393 ಮಿ.ಮೀ ವಾಡಿಕೆ ಮಳೆ ಆಗಬೇಕಿತ್ತು. ಆದರೆ 363.3ಮಿ.ಮೀ ಮಳೆಯಾಗಿದೆ. ತೂಬಗೆರೆ ಹೋಬಳಿಯಲ್ಲಿ 312.3 ಮಿ.ಮೀ, ಸಾಸಲು ಹೋಬಳಿಯಲ್ಲಿ 329.8ಮಿ.ಮೀ, ಕನಸವಾಡಿಯಲ್ಲಿ415.1ಮಿ.ಮೀ, ದೊಡ್ಡಬೆಳಗಲದಲ್ಲಿ 406.1ಮಿ.ಮೀ, ಕಸಬಾ ಹೋಬಳಿಯಲ್ಲಿ 370.1ಮಿ.ಮೀ ಮಳೆಯಾಗಿದೆ. ತಿಂಗಳ ಒಟ್ಟು ಸರಾಸರಿ 2023ರಲ್ಲಿ 363ಮಿ.ಮೀ ಮಳೆ ಬಿದ್ದಿದೆ ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಡಿ.ರಾಜೇಶ್ವರಿ ತಿಳಿಸಿದರು.
ತಾಲೂಕಿನಲ್ಲಿ 16.122 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಗುರಿ ಹೊಂದಲಾಗಿತ್ತು, ಆದರೆ ಮಳೆ ಅಭಾವದಿಂದ ಕೇವಲ 15,250 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರಾಗಿ ಬೆಳೆಯಲಾಗಿದೆ. ಆ ರಾಗಿ ಪ್ರಸ್ತುತ ಮಳೆ ಇಲ್ಲದೆ ಒಣಗಿ ಹೋಗಿದೆ. ಅಇದೇರೀತಿ 7.350 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಬೇಕಿತ್ತು. ಆದರೆ 5.444 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ 360 ಹೆಕ್ಟೇರ್ ಗುರಿ, ಬಿತ್ತನೆಯಾಗಿರುವುದು 227 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಎಂದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…