ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು. ಮುಂಗಾರು ಪ್ರಾರಂಭವಾದ ಕೂಡಲೇ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು.
ಆದರೆ ಪ್ರಸ್ತುತ ವರ್ಷ ಮುಂಗಾರು ಮಳೆ ತಡವಾಗಿ ಆರಂಭವಾಗಿ, ಅತಿವೃಷ್ಟಿ ಸೃಷ್ಟಿಸಿದೆ. ಇದರಿಂದ ಮುಂಗಾರುನಲ್ಲಿ ಸೂಕ್ತ ರೀತಿಯಲ್ಲಿ ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ನಿಧಾನಗತಿಯಲ್ಲೇ ಸಾಗಿದ್ದವು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಮಳೆ ಆಗಿದ್ದರಿಂದ ಬೀಜ ಬಿತ್ತಿದ್ದ ರೈತರಿಗೆ ಇದೀಗ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲೇ ರೈತನ ಕಣ್ಮುಂದೆಯೇ ಬಾಡಿಹೋಗುತ್ತಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೇ ಸೊರಗುತ್ತಿವೆ. ಕೆರೆ ಕುಂಟೆಗಳಿ ಬರಿದಾಗುತ್ತಿವೆ.
ಮೇ-ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ 363.3 ಮಿ.ಮೀ ಮಳೆ
ತಾಲೂಕಿನಲ್ಲಿ ಮೇ ತಿಂಗಳಿಂದ ಆಗಸ್ಟ್ ಎರಡನೇ ವಾರದ ಅಂತ್ಯದವರೆಗೆ 393 ಮಿ.ಮೀ ವಾಡಿಕೆ ಮಳೆ ಆಗಬೇಕಿತ್ತು. ಆದರೆ 363.3ಮಿ.ಮೀ ಮಳೆಯಾಗಿದೆ. ತೂಬಗೆರೆ ಹೋಬಳಿಯಲ್ಲಿ 312.3 ಮಿ.ಮೀ, ಸಾಸಲು ಹೋಬಳಿಯಲ್ಲಿ 329.8ಮಿ.ಮೀ, ಕನಸವಾಡಿಯಲ್ಲಿ415.1ಮಿ.ಮೀ, ದೊಡ್ಡಬೆಳಗಲದಲ್ಲಿ 406.1ಮಿ.ಮೀ, ಕಸಬಾ ಹೋಬಳಿಯಲ್ಲಿ 370.1ಮಿ.ಮೀ ಮಳೆಯಾಗಿದೆ. ತಿಂಗಳ ಒಟ್ಟು ಸರಾಸರಿ 2023ರಲ್ಲಿ 363ಮಿ.ಮೀ ಮಳೆ ಬಿದ್ದಿದೆ ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಡಿ.ರಾಜೇಶ್ವರಿ ತಿಳಿಸಿದರು.
ತಾಲೂಕಿನಲ್ಲಿ 16.122 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಗುರಿ ಹೊಂದಲಾಗಿತ್ತು, ಆದರೆ ಮಳೆ ಅಭಾವದಿಂದ ಕೇವಲ 15,250 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರಾಗಿ ಬೆಳೆಯಲಾಗಿದೆ. ಆ ರಾಗಿ ಪ್ರಸ್ತುತ ಮಳೆ ಇಲ್ಲದೆ ಒಣಗಿ ಹೋಗಿದೆ. ಅಇದೇರೀತಿ 7.350 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಬೇಕಿತ್ತು. ಆದರೆ 5.444 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ 360 ಹೆಕ್ಟೇರ್ ಗುರಿ, ಬಿತ್ತನೆಯಾಗಿರುವುದು 227 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಎಂದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…