ಮಳೆಗಾಲದಲ್ಲಿ ದಾಖಲೆಯ ಬಿರು ಬಿಸಿಲು: ಬಾರದ ಮಳೆ: ಕಮರಿದ ಬೆಳೆ: ಸಂಕಷ್ಟದಲ್ಲಿ ರೈತ: ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ: ಗುರಿಗಿಂತ ಕಡಿಮೆ ಬಿತ್ತನೆ ಕಾರ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್​ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು‌. ಮುಂಗಾರು ಪ್ರಾರಂಭವಾದ ಕೂಡಲೇ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು.

ಆದರೆ ಪ್ರಸ್ತುತ ವರ್ಷ ಮುಂಗಾರು ಮಳೆ ತಡವಾಗಿ ಆರಂಭವಾಗಿ, ಅತಿವೃಷ್ಟಿ‌ ಸೃಷ್ಟಿಸಿದೆ. ಇದರಿಂದ ಮುಂಗಾರುನಲ್ಲಿ ಸೂಕ್ತ ರೀತಿಯಲ್ಲಿ ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ನಿಧಾನಗತಿಯಲ್ಲೇ ಸಾಗಿದ್ದವು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಮಳೆ ಆಗಿದ್ದರಿಂದ ಬೀಜ ಬಿತ್ತಿದ್ದ ರೈತರಿಗೆ ಇದೀಗ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲೇ ರೈತನ ಕಣ್ಮುಂದೆಯೇ ಬಾಡಿಹೋಗುತ್ತಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೇ ಸೊರಗುತ್ತಿವೆ. ಕೆರೆ ಕುಂಟೆಗಳಿ‌ ಬರಿದಾಗುತ್ತಿವೆ.

ಬಿತ್ತನೆ ಕಾರ್ಯಕ್ಕೆ ಸಾವಿರಾರು ಹಣ ಖರ್ಚು ಮಾಡಿದ್ದ ರೈತ ಇದೀಗ ಸಂಕಷ್ಟದಲ್ಲಿದ್ದಾನೆ. ಮಳೆಗಾಗಿ ಗ್ರಾಮೀಣ ಭಾಗಗಳಲ್ಲಿ ಬಹಳ ಹಿಂದಿನ ಕಾಲದಲ್ಲಿ ಆಚರಿಸುತ್ತಿದ್ದ ಆಚರಣೆಗಳು, ರೂಢಿ, ಸಂಪ್ರದಾಯಗಳು ಪ್ರಸ್ತುತ ಮರುಕಳಿಸುತ್ತಿವೆ. ಚಂದಮಾಮ ಮದುವೆ, ಬಂಡಿ ದೇವರು, ಸೂರ್ಯ, ಚಂದ್ರರಿಗೆ ಪೂಜೆ, ಗಂಡು ಮಕ್ಕಳಿಗೆ ವಧು-ವರರ ಪೋಷಾಕು ಧರಿಸಿ ಸಾಂಕೇತಿಕ ಮದುವೆ ಮಾಡುವ ಆಚರಣೆ ಸೇರಿದಂತೆ ಇತರೆ ಪೂಜೆ ಪುನಸ್ಕಾರ ಮಾಡಿ ಮಳೆರಾಯನ ಮೊರೆ ಹೋದರೂ ರೈತನ ಕೂಗು ವರುಣ ದೇವನನ್ನು ತಲುಪಿಲ್ಲ.

ಮೇ-ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ 363.3 ಮಿ.ಮೀ ಮಳೆ

ತಾಲೂಕಿನಲ್ಲಿ ಮೇ ತಿಂಗಳಿಂದ ಆಗಸ್ಟ್ ಎರಡನೇ ವಾರದ ಅಂತ್ಯದವರೆಗೆ 393 ಮಿ.ಮೀ‌ ವಾಡಿಕೆ ಮಳೆ ಆಗಬೇಕಿತ್ತು. ಆದರೆ 363.3ಮಿ.ಮೀ ಮಳೆಯಾಗಿದೆ. ತೂಬಗೆರೆ ಹೋಬಳಿಯಲ್ಲಿ 312.3 ಮಿ.ಮೀ, ಸಾಸಲು ಹೋಬಳಿಯಲ್ಲಿ 329.8ಮಿ.ಮೀ, ಕನಸವಾಡಿಯಲ್ಲಿ‌415.1ಮಿ.ಮೀ, ದೊಡ್ಡಬೆಳಗಲದಲ್ಲಿ 406.1ಮಿ.ಮೀ, ಕಸಬಾ ಹೋಬಳಿಯಲ್ಲಿ 370.1ಮಿ.ಮೀ ಮಳೆಯಾಗಿದೆ. ತಿಂಗಳ ಒಟ್ಟು ಸರಾಸರಿ 2023ರಲ್ಲಿ 363ಮಿ.ಮೀ ಮಳೆ ಬಿದ್ದಿದೆ ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಡಿ.ರಾಜೇಶ್ವರಿ ತಿಳಿಸಿದರು.

ಮಳೆ ಕೊರತೆ, ಕುಂಠಿತಗೊಂಡ ಬಿತ್ತನೆ ಕಾರ್ಯ

ತಾಲೂಕಿನಲ್ಲಿ 16.122 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಗುರಿ ಹೊಂದಲಾಗಿತ್ತು, ಆದರೆ ಮಳೆ ಅಭಾವದಿಂದ ಕೇವಲ 15,250 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರಾಗಿ ಬೆಳೆಯಲಾಗಿದೆ. ಆ ರಾಗಿ ಪ್ರಸ್ತುತ ಮಳೆ‌ ಇಲ್ಲದೆ‌ ಒಣಗಿ ಹೋಗಿದೆ. ಅಇದೇರೀತಿ 7.350 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಬೇಕಿತ್ತು. ಆದರೆ 5.444 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ 360 ಹೆಕ್ಟೇರ್ ಗುರಿ, ಬಿತ್ತನೆಯಾಗಿರುವುದು 227 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

25 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago