ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು. ಮುಂಗಾರು ಪ್ರಾರಂಭವಾದ ಕೂಡಲೇ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು.
ಆದರೆ ಪ್ರಸ್ತುತ ವರ್ಷ ಮುಂಗಾರು ಮಳೆ ತಡವಾಗಿ ಆರಂಭವಾಗಿ, ಅತಿವೃಷ್ಟಿ ಸೃಷ್ಟಿಸಿದೆ. ಇದರಿಂದ ಮುಂಗಾರುನಲ್ಲಿ ಸೂಕ್ತ ರೀತಿಯಲ್ಲಿ ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ನಿಧಾನಗತಿಯಲ್ಲೇ ಸಾಗಿದ್ದವು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಮಳೆ ಆಗಿದ್ದರಿಂದ ಬೀಜ ಬಿತ್ತಿದ್ದ ರೈತರಿಗೆ ಇದೀಗ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲೇ ರೈತನ ಕಣ್ಮುಂದೆಯೇ ಬಾಡಿಹೋಗುತ್ತಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೇ ಸೊರಗುತ್ತಿವೆ. ಕೆರೆ ಕುಂಟೆಗಳಿ ಬರಿದಾಗುತ್ತಿವೆ.
ಮೇ-ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ 363.3 ಮಿ.ಮೀ ಮಳೆ
ತಾಲೂಕಿನಲ್ಲಿ ಮೇ ತಿಂಗಳಿಂದ ಆಗಸ್ಟ್ ಎರಡನೇ ವಾರದ ಅಂತ್ಯದವರೆಗೆ 393 ಮಿ.ಮೀ ವಾಡಿಕೆ ಮಳೆ ಆಗಬೇಕಿತ್ತು. ಆದರೆ 363.3ಮಿ.ಮೀ ಮಳೆಯಾಗಿದೆ. ತೂಬಗೆರೆ ಹೋಬಳಿಯಲ್ಲಿ 312.3 ಮಿ.ಮೀ, ಸಾಸಲು ಹೋಬಳಿಯಲ್ಲಿ 329.8ಮಿ.ಮೀ, ಕನಸವಾಡಿಯಲ್ಲಿ415.1ಮಿ.ಮೀ, ದೊಡ್ಡಬೆಳಗಲದಲ್ಲಿ 406.1ಮಿ.ಮೀ, ಕಸಬಾ ಹೋಬಳಿಯಲ್ಲಿ 370.1ಮಿ.ಮೀ ಮಳೆಯಾಗಿದೆ. ತಿಂಗಳ ಒಟ್ಟು ಸರಾಸರಿ 2023ರಲ್ಲಿ 363ಮಿ.ಮೀ ಮಳೆ ಬಿದ್ದಿದೆ ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಡಿ.ರಾಜೇಶ್ವರಿ ತಿಳಿಸಿದರು.
ತಾಲೂಕಿನಲ್ಲಿ 16.122 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಗುರಿ ಹೊಂದಲಾಗಿತ್ತು, ಆದರೆ ಮಳೆ ಅಭಾವದಿಂದ ಕೇವಲ 15,250 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರಾಗಿ ಬೆಳೆಯಲಾಗಿದೆ. ಆ ರಾಗಿ ಪ್ರಸ್ತುತ ಮಳೆ ಇಲ್ಲದೆ ಒಣಗಿ ಹೋಗಿದೆ. ಅಇದೇರೀತಿ 7.350 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಬೇಕಿತ್ತು. ಆದರೆ 5.444 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ 360 ಹೆಕ್ಟೇರ್ ಗುರಿ, ಬಿತ್ತನೆಯಾಗಿರುವುದು 227 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…