ಮಳೆಗಾಲದಲ್ಲಿ ದಾಖಲೆಯ ಬಿರು ಬಿಸಿಲು: ಬಾರದ ಮಳೆ: ಕಮರಿದ ಬೆಳೆ: ಸಂಕಷ್ಟದಲ್ಲಿ ರೈತ: ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ: ಗುರಿಗಿಂತ ಕಡಿಮೆ ಬಿತ್ತನೆ ಕಾರ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್​ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು‌. ಮುಂಗಾರು ಪ್ರಾರಂಭವಾದ ಕೂಡಲೇ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು.

ಆದರೆ ಪ್ರಸ್ತುತ ವರ್ಷ ಮುಂಗಾರು ಮಳೆ ತಡವಾಗಿ ಆರಂಭವಾಗಿ, ಅತಿವೃಷ್ಟಿ‌ ಸೃಷ್ಟಿಸಿದೆ. ಇದರಿಂದ ಮುಂಗಾರುನಲ್ಲಿ ಸೂಕ್ತ ರೀತಿಯಲ್ಲಿ ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ನಿಧಾನಗತಿಯಲ್ಲೇ ಸಾಗಿದ್ದವು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಮಳೆ ಆಗಿದ್ದರಿಂದ ಬೀಜ ಬಿತ್ತಿದ್ದ ರೈತರಿಗೆ ಇದೀಗ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲೇ ರೈತನ ಕಣ್ಮುಂದೆಯೇ ಬಾಡಿಹೋಗುತ್ತಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೇ ಸೊರಗುತ್ತಿವೆ. ಕೆರೆ ಕುಂಟೆಗಳಿ‌ ಬರಿದಾಗುತ್ತಿವೆ.

ಬಿತ್ತನೆ ಕಾರ್ಯಕ್ಕೆ ಸಾವಿರಾರು ಹಣ ಖರ್ಚು ಮಾಡಿದ್ದ ರೈತ ಇದೀಗ ಸಂಕಷ್ಟದಲ್ಲಿದ್ದಾನೆ. ಮಳೆಗಾಗಿ ಗ್ರಾಮೀಣ ಭಾಗಗಳಲ್ಲಿ ಬಹಳ ಹಿಂದಿನ ಕಾಲದಲ್ಲಿ ಆಚರಿಸುತ್ತಿದ್ದ ಆಚರಣೆಗಳು, ರೂಢಿ, ಸಂಪ್ರದಾಯಗಳು ಪ್ರಸ್ತುತ ಮರುಕಳಿಸುತ್ತಿವೆ. ಚಂದಮಾಮ ಮದುವೆ, ಬಂಡಿ ದೇವರು, ಸೂರ್ಯ, ಚಂದ್ರರಿಗೆ ಪೂಜೆ, ಗಂಡು ಮಕ್ಕಳಿಗೆ ವಧು-ವರರ ಪೋಷಾಕು ಧರಿಸಿ ಸಾಂಕೇತಿಕ ಮದುವೆ ಮಾಡುವ ಆಚರಣೆ ಸೇರಿದಂತೆ ಇತರೆ ಪೂಜೆ ಪುನಸ್ಕಾರ ಮಾಡಿ ಮಳೆರಾಯನ ಮೊರೆ ಹೋದರೂ ರೈತನ ಕೂಗು ವರುಣ ದೇವನನ್ನು ತಲುಪಿಲ್ಲ.

ಮೇ-ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ 363.3 ಮಿ.ಮೀ ಮಳೆ

ತಾಲೂಕಿನಲ್ಲಿ ಮೇ ತಿಂಗಳಿಂದ ಆಗಸ್ಟ್ ಎರಡನೇ ವಾರದ ಅಂತ್ಯದವರೆಗೆ 393 ಮಿ.ಮೀ‌ ವಾಡಿಕೆ ಮಳೆ ಆಗಬೇಕಿತ್ತು. ಆದರೆ 363.3ಮಿ.ಮೀ ಮಳೆಯಾಗಿದೆ. ತೂಬಗೆರೆ ಹೋಬಳಿಯಲ್ಲಿ 312.3 ಮಿ.ಮೀ, ಸಾಸಲು ಹೋಬಳಿಯಲ್ಲಿ 329.8ಮಿ.ಮೀ, ಕನಸವಾಡಿಯಲ್ಲಿ‌415.1ಮಿ.ಮೀ, ದೊಡ್ಡಬೆಳಗಲದಲ್ಲಿ 406.1ಮಿ.ಮೀ, ಕಸಬಾ ಹೋಬಳಿಯಲ್ಲಿ 370.1ಮಿ.ಮೀ ಮಳೆಯಾಗಿದೆ. ತಿಂಗಳ ಒಟ್ಟು ಸರಾಸರಿ 2023ರಲ್ಲಿ 363ಮಿ.ಮೀ ಮಳೆ ಬಿದ್ದಿದೆ ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಡಿ.ರಾಜೇಶ್ವರಿ ತಿಳಿಸಿದರು.

ಮಳೆ ಕೊರತೆ, ಕುಂಠಿತಗೊಂಡ ಬಿತ್ತನೆ ಕಾರ್ಯ

ತಾಲೂಕಿನಲ್ಲಿ 16.122 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಗುರಿ ಹೊಂದಲಾಗಿತ್ತು, ಆದರೆ ಮಳೆ ಅಭಾವದಿಂದ ಕೇವಲ 15,250 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರಾಗಿ ಬೆಳೆಯಲಾಗಿದೆ. ಆ ರಾಗಿ ಪ್ರಸ್ತುತ ಮಳೆ‌ ಇಲ್ಲದೆ‌ ಒಣಗಿ ಹೋಗಿದೆ. ಅಇದೇರೀತಿ 7.350 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಬೇಕಿತ್ತು. ಆದರೆ 5.444 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ 360 ಹೆಕ್ಟೇರ್ ಗುರಿ, ಬಿತ್ತನೆಯಾಗಿರುವುದು 227 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಎಂದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago