ದೊಡ್ಡಬಳ್ಳಾಪುರ (ಆ.11) : ತಾಲ್ಲೂಕಿನ ತೂಬಗೆರೆ–ಕಲ್ಲುಕೋಟೆ ರಸ್ತೆ ನಿರಂತರ ಮಳೆಗೆ ಸಂಪೂರ್ಣ ಕೆರೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ವರ್ಷಗಳಿಂದ ಡಾಂಬರು ಹಾಕಿಸದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಸುತ್ತಮುತ್ತಲಿನ ಗ್ರಾಮಸ್ಥರು, ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಗಳಲ್ಲಿ ರಾಗಿ ನಾಟಿ ಮಾಡಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಸುಮಾರು ಹದಿನೈದು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಪ್ರತಿದಿನ ಶಾಲೆ, ಕಾಲೇಜು ಹಾಗೂ ಉದ್ಯೋಗ ಸ್ಥಳಗಳಿಗೆ ತೆರಳುವ ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿ, ವಾಹನಗಳು ಕೆಸರುಗದ್ದೆಯಲ್ಲಿ ಸಿಲುಕುವಂತಾಗುತ್ತಿದೆ. ಬಸ್ ಹಾಗೂ ಇತರೆ ವಾಹನಗಳು ಸಂಚರಿಸಲು ಕಷ್ಟವಾಗಿರುವ ಕಾರಣ, ಕೆಲ ಹಳ್ಳಿಗಳು ಬಹುತೇಕ ಪ್ರತ್ಯೇಕಗೊಂಡಂತ ಸ್ಥಿತಿಯಲ್ಲಿವೆ.
ಸ್ಥಳೀಯರು ಹೇಳುವಂತೆ, ಈ ರಸ್ತೆಯ ದುಸ್ಥಿತಿಯಿಂದ ಆರೋಗ್ಯ ಸಮಸ್ಯೆಗಳೂ ಗಂಭೀರ ರೂಪ ಪಡೆದುಕೊಂಡಿವೆ. ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪಲು ಸಮಯ ಕಳೆದು ಅಪಾಯವಾಗುವ ಘಟನೆಗಳೂ ನಡೆದಿವೆ. ವಿಶೇಷವಾಗಿ, ಗರ್ಭಿಣಿಯರನ್ನು ಆಸ್ಪತ್ರೆಗೆ ಸಾಗಿಸಲು ವಿಳಂಬವಾದ ಪರಿಣಾಮ, ಗರ್ಭಪಾತದಂತಹ ದುರ್ಘಟನೆಗಳೂ ನಡೆದಿವೆ ಎಂದು ಆರೋಪಿಸಲಾಗಿದೆ.
ಈ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ಹೇಳುವಾಗ, “ರಸ್ತೆಯ ಗುಂಡಿಗಳಿಂದ ಆಂಬ್ಯುಲೆನ್ಸ್ ಅಥವಾ ವಾಹನಗಳು ಬೇಗ ಸಾಗಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ತಾಯಂದಿರು ಮತ್ತು ಶಿಶುಗಳ ಜೀವ ಹಾನಿಯಾಗುವ ಸ್ಥಿತಿ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಪರಿಹಾರ ಕಾಣಲಿಲ್ಲ,” ಎಂದು ವಿಷಾದಿಸಿದರು.
ನಮ್ಮ ಹಳ್ಳಿಗಳ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಕೇಳುವ ಸ್ಥಿತಿಯಲ್ಲೇ ಇಲ್ಲ. ಚುನಾವಣೆ ವೇಳೆ ದೊಡ್ಡ ಮಾತುಗಳನ್ನಾಡಿ, ನಂತರ ಜನರ ನೋವುಗಳನ್ನು ಕಡೆಗಣಿಸುವುದು ಅವರ ಅಹಂಕಾರದ ನೈಜ ಮುಖ. ಜನರನ್ನು ಮರೆತರೆ, ಜನರು ಅವರನ್ನು ಮರೆತೇ ಬಿಡುತ್ತಾರೆ ಎಂದು ಹೇಳಿದರು.
ಈ ರಸ್ತೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಸ್ಪರ್ಧಿಸುವ ಕ್ಷೇತ್ರದ ಭಾಗವಾಗಿರುವುದರಿಂದ, ಸಮಸ್ಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರು, ಚುನಾವಣೆ ವೇಳೆ ನೀಡಿದ ಭರವಸೆಗಳು ನೆಲೆಯೂರದಿರುವುದನ್ನು ಟೀಕಿಸಿದ್ದಾರೆ.
ಗ್ರಾಮಸ್ಥರು ಜಿಲ್ಲಾ ಹಾಗೂ ಸಾರ್ವಜನಿಕ ಕಾರ್ಯ ಇಲಾಖೆಗೆ ತಕ್ಷಣ ರಸ್ತೆ ಸುಧಾರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಮುಂದುವರಿಸಿ, ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…