ಮಳೆಗೆ ಕೆರೆಯಂತಾದ ತೂಬಗೆರೆ ಕಲ್ಲುಕೋಟೆ ಸಂಪರ್ಕ ರಸ್ತೆ: ರಾಗಿನಾಟಿ ಮಾಡಿ ಗ್ರಾಮಸ್ಥರ ವಿಶಿಷ್ಟ ಪ್ರತಿಭಟನೆ

ದೊಡ್ಡಬಳ್ಳಾಪುರ (ಆ.11) : ತಾಲ್ಲೂಕಿನ ತೂಬಗೆರೆ–ಕಲ್ಲುಕೋಟೆ ರಸ್ತೆ ನಿರಂತರ ಮಳೆಗೆ ಸಂಪೂರ್ಣ ಕೆರೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ವರ್ಷಗಳಿಂದ ಡಾಂಬರು ಹಾಕಿಸದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಸುತ್ತಮುತ್ತಲಿನ ಗ್ರಾಮಸ್ಥರು, ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಗಳಲ್ಲಿ ರಾಗಿ ನಾಟಿ ಮಾಡಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು ಹದಿನೈದು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಪ್ರತಿದಿನ ಶಾಲೆ, ಕಾಲೇಜು ಹಾಗೂ ಉದ್ಯೋಗ ಸ್ಥಳಗಳಿಗೆ ತೆರಳುವ ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿ, ವಾಹನಗಳು ಕೆಸರುಗದ್ದೆಯಲ್ಲಿ ಸಿಲುಕುವಂತಾಗುತ್ತಿದೆ. ಬಸ್ ಹಾಗೂ ಇತರೆ ವಾಹನಗಳು ಸಂಚರಿಸಲು ಕಷ್ಟವಾಗಿರುವ ಕಾರಣ, ಕೆಲ ಹಳ್ಳಿಗಳು ಬಹುತೇಕ ಪ್ರತ್ಯೇಕಗೊಂಡಂತ ಸ್ಥಿತಿಯಲ್ಲಿವೆ.

ಸ್ಥಳೀಯರು ಹೇಳುವಂತೆ, ಈ ರಸ್ತೆಯ ದುಸ್ಥಿತಿಯಿಂದ ಆರೋಗ್ಯ ಸಮಸ್ಯೆಗಳೂ ಗಂಭೀರ ರೂಪ ಪಡೆದುಕೊಂಡಿವೆ. ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪಲು ಸಮಯ ಕಳೆದು ಅಪಾಯವಾಗುವ ಘಟನೆಗಳೂ ನಡೆದಿವೆ. ವಿಶೇಷವಾಗಿ, ಗರ್ಭಿಣಿಯರನ್ನು ಆಸ್ಪತ್ರೆಗೆ ಸಾಗಿಸಲು ವಿಳಂಬವಾದ ಪರಿಣಾಮ, ಗರ್ಭಪಾತದಂತಹ ದುರ್ಘಟನೆಗಳೂ ನಡೆದಿವೆ ಎಂದು ಆರೋಪಿಸಲಾಗಿದೆ.

ಈ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ಹೇಳುವಾಗ, “ರಸ್ತೆಯ ಗುಂಡಿಗಳಿಂದ ಆಂಬ್ಯುಲೆನ್ಸ್ ಅಥವಾ ವಾಹನಗಳು ಬೇಗ ಸಾಗಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ತಾಯಂದಿರು ಮತ್ತು ಶಿಶುಗಳ ಜೀವ ಹಾನಿಯಾಗುವ ಸ್ಥಿತಿ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಪರಿಹಾರ ಕಾಣಲಿಲ್ಲ,” ಎಂದು ವಿಷಾದಿಸಿದರು.

ನಮ್ಮ ಹಳ್ಳಿಗಳ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಕೇಳುವ ಸ್ಥಿತಿಯಲ್ಲೇ ಇಲ್ಲ. ಚುನಾವಣೆ ವೇಳೆ ದೊಡ್ಡ ಮಾತುಗಳನ್ನಾಡಿ, ನಂತರ ಜನರ ನೋವುಗಳನ್ನು ಕಡೆಗಣಿಸುವುದು ಅವರ ಅಹಂಕಾರದ ನೈಜ ಮುಖ. ಜನರನ್ನು ಮರೆತರೆ, ಜನರು ಅವರನ್ನು ಮರೆತೇ ಬಿಡುತ್ತಾರೆ ಎಂದು ಹೇಳಿದರು.

ಈ ರಸ್ತೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಸ್ಪರ್ಧಿಸುವ ಕ್ಷೇತ್ರದ ಭಾಗವಾಗಿರುವುದರಿಂದ, ಸಮಸ್ಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರು, ಚುನಾವಣೆ ವೇಳೆ ನೀಡಿದ ಭರವಸೆಗಳು ನೆಲೆಯೂರದಿರುವುದನ್ನು ಟೀಕಿಸಿದ್ದಾರೆ.

ಗ್ರಾಮಸ್ಥರು ಜಿಲ್ಲಾ ಹಾಗೂ ಸಾರ್ವಜನಿಕ ಕಾರ್ಯ ಇಲಾಖೆಗೆ ತಕ್ಷಣ ರಸ್ತೆ ಸುಧಾರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಮುಂದುವರಿಸಿ, ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

19 hours ago