ಮಳೆಗೆ ಕೆರೆಯಂತಾದ ತೂಬಗೆರೆ ಕಲ್ಲುಕೋಟೆ ಸಂಪರ್ಕ ರಸ್ತೆ: ರಾಗಿನಾಟಿ ಮಾಡಿ ಗ್ರಾಮಸ್ಥರ ವಿಶಿಷ್ಟ ಪ್ರತಿಭಟನೆ

ದೊಡ್ಡಬಳ್ಳಾಪುರ (ಆ.11) : ತಾಲ್ಲೂಕಿನ ತೂಬಗೆರೆ–ಕಲ್ಲುಕೋಟೆ ರಸ್ತೆ ನಿರಂತರ ಮಳೆಗೆ ಸಂಪೂರ್ಣ ಕೆರೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ವರ್ಷಗಳಿಂದ ಡಾಂಬರು ಹಾಕಿಸದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಸುತ್ತಮುತ್ತಲಿನ ಗ್ರಾಮಸ್ಥರು, ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಗಳಲ್ಲಿ ರಾಗಿ ನಾಟಿ ಮಾಡಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು ಹದಿನೈದು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಪ್ರತಿದಿನ ಶಾಲೆ, ಕಾಲೇಜು ಹಾಗೂ ಉದ್ಯೋಗ ಸ್ಥಳಗಳಿಗೆ ತೆರಳುವ ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿ, ವಾಹನಗಳು ಕೆಸರುಗದ್ದೆಯಲ್ಲಿ ಸಿಲುಕುವಂತಾಗುತ್ತಿದೆ. ಬಸ್ ಹಾಗೂ ಇತರೆ ವಾಹನಗಳು ಸಂಚರಿಸಲು ಕಷ್ಟವಾಗಿರುವ ಕಾರಣ, ಕೆಲ ಹಳ್ಳಿಗಳು ಬಹುತೇಕ ಪ್ರತ್ಯೇಕಗೊಂಡಂತ ಸ್ಥಿತಿಯಲ್ಲಿವೆ.

ಸ್ಥಳೀಯರು ಹೇಳುವಂತೆ, ಈ ರಸ್ತೆಯ ದುಸ್ಥಿತಿಯಿಂದ ಆರೋಗ್ಯ ಸಮಸ್ಯೆಗಳೂ ಗಂಭೀರ ರೂಪ ಪಡೆದುಕೊಂಡಿವೆ. ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪಲು ಸಮಯ ಕಳೆದು ಅಪಾಯವಾಗುವ ಘಟನೆಗಳೂ ನಡೆದಿವೆ. ವಿಶೇಷವಾಗಿ, ಗರ್ಭಿಣಿಯರನ್ನು ಆಸ್ಪತ್ರೆಗೆ ಸಾಗಿಸಲು ವಿಳಂಬವಾದ ಪರಿಣಾಮ, ಗರ್ಭಪಾತದಂತಹ ದುರ್ಘಟನೆಗಳೂ ನಡೆದಿವೆ ಎಂದು ಆರೋಪಿಸಲಾಗಿದೆ.

ಈ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ಹೇಳುವಾಗ, “ರಸ್ತೆಯ ಗುಂಡಿಗಳಿಂದ ಆಂಬ್ಯುಲೆನ್ಸ್ ಅಥವಾ ವಾಹನಗಳು ಬೇಗ ಸಾಗಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ತಾಯಂದಿರು ಮತ್ತು ಶಿಶುಗಳ ಜೀವ ಹಾನಿಯಾಗುವ ಸ್ಥಿತಿ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಪರಿಹಾರ ಕಾಣಲಿಲ್ಲ,” ಎಂದು ವಿಷಾದಿಸಿದರು.

ನಮ್ಮ ಹಳ್ಳಿಗಳ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಕೇಳುವ ಸ್ಥಿತಿಯಲ್ಲೇ ಇಲ್ಲ. ಚುನಾವಣೆ ವೇಳೆ ದೊಡ್ಡ ಮಾತುಗಳನ್ನಾಡಿ, ನಂತರ ಜನರ ನೋವುಗಳನ್ನು ಕಡೆಗಣಿಸುವುದು ಅವರ ಅಹಂಕಾರದ ನೈಜ ಮುಖ. ಜನರನ್ನು ಮರೆತರೆ, ಜನರು ಅವರನ್ನು ಮರೆತೇ ಬಿಡುತ್ತಾರೆ ಎಂದು ಹೇಳಿದರು.

ಈ ರಸ್ತೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಸ್ಪರ್ಧಿಸುವ ಕ್ಷೇತ್ರದ ಭಾಗವಾಗಿರುವುದರಿಂದ, ಸಮಸ್ಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರು, ಚುನಾವಣೆ ವೇಳೆ ನೀಡಿದ ಭರವಸೆಗಳು ನೆಲೆಯೂರದಿರುವುದನ್ನು ಟೀಕಿಸಿದ್ದಾರೆ.

ಗ್ರಾಮಸ್ಥರು ಜಿಲ್ಲಾ ಹಾಗೂ ಸಾರ್ವಜನಿಕ ಕಾರ್ಯ ಇಲಾಖೆಗೆ ತಕ್ಷಣ ರಸ್ತೆ ಸುಧಾರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಮುಂದುವರಿಸಿ, ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

2 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

3 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

6 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

13 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

16 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago