ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.
ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…