ಮಳೆಯಿಂದ ಆಗುವ ಜೀವ ಹಾನಿಯನ್ನು ತಪ್ಪಿಸಲು ಸಹಾಯವಾಣಿ

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.

ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 hours ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

6 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago