ಮಳೆಯಿಂದ ಆಗುವ ಜೀವ ಹಾನಿಯನ್ನು ತಪ್ಪಿಸಲು ಸಹಾಯವಾಣಿ

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.

ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

13 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago