ಮಳೆಯಿಂದ ಆಗುವ ಜೀವ ಹಾನಿಯನ್ನು ತಪ್ಪಿಸಲು ಸಹಾಯವಾಣಿ

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.

ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

27 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

36 minutes ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

6 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

15 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago