ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.
ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…