ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.
ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…