ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…