ಮಳೆ ತಂದ ಅವಾಂತರ: ನೂರಾರು ಎಕರೆ ಬೆಳೆ ಹಾನಿ: ‘ಕಾಟಾಚಾರದ ಜಿಲ್ಲಾಧಿಕಾರಿಗಳ ಬೆಳೆ ಹಾನಿ ವಿಸಿಟ್’: ಅಧಿಕಾರಿಗಳ ವಿರುದ್ಧ ರೈತರು ಗರಂ..!

ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ ಕೃಷಿ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಅಕ್ರೋಶ ವ್ಯಕ್ತಪಡಿಸುತ್ತಾರೆಂಬ ಕಾರಣಕ್ಕೆ, ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ ಅಧಿಕಾರಿಗಳು, ಕೇವಲ 10 ನಿಮಿಷಗಳ ಅವಧಿಯಲ್ಲಿ ಕೇವಲ ಒಂದು ತೋಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿಂದ ತೆರಳಿದ್ದಾರೆ, ಕಾಟಚಾರಕ್ಕೆ ನಡೆದ ಜಿಲ್ಲಾಧಿಕಾರಿಗಳ ಬೆಳೆಹಾನಿ ಭೇಟಿ ಬಗ್ಗೆ ರೈತರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.

ಮಳೆಯಿಂದ ಬೆಳೆ ನಾಶವಾದ ತೋಟಗಳಿಗೆ ಜಿಲ್ಲಾಧಿಕಾರಿಗಳಾದ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸುವುದ್ದಾಗಿ ಹೇಳಿದ್ರು, ಅದರಂತೆ ಇಂದು ಬೆಳಗ್ಗೆ 9:30ಕ್ಕೆ ಕಸವನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದರು, ಜಿಲ್ಲಾಧಿಕಾರಿಗಳಿಗೆ ತಮ್ಮ ನೋವು ಹೇಳಲು ಸಾಕಷ್ಟು ರೈತರು ಗ್ರಾಮದಲ್ಲಿ ಕಾದಿದ್ದರು, ತಮಗಾಗಿ ಕಾದಿದ್ದ ರೈತರನ್ನ ಬಿಟ್ಟು ಗ್ರಾಮದ ಹೊರಗಿನ ಒಂದು ತೋಟಕ್ಕೆ ಭೇಟಿ ಕೆಲವೇ ಕ್ಷಣದಲ್ಲಿ ಅಲ್ಲಿಂದ ತೆರಳಿದ್ದಾರೆ, ಜಿಲ್ಲಾಧಿಕಾರಿಗಳಿಗೆ ಕಾದಿದ್ದ ರೈತರು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಾರೆ, ಇದರಿಂದ ಹೆದರಿದ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿ ರೈತರು ಭೇಟಿಯಾಗದಂತೆ ಮಾಡಿದ್ದಾರೆಂದು ತಮ್ಮ ಸಿಟ್ಟು ಹೊರ ಹಾಕಿದ ರೈತ ಅಂಬರೀಷ್.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

17 minutes ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

27 minutes ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

19 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

19 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

20 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

23 hours ago