ಮಳೆ ತಂದ ಅವಾಂತರ: ನೂರಾರು ಎಕರೆ ಬೆಳೆ ಹಾನಿ: ‘ಕಾಟಾಚಾರದ ಜಿಲ್ಲಾಧಿಕಾರಿಗಳ ಬೆಳೆ ಹಾನಿ ವಿಸಿಟ್’: ಅಧಿಕಾರಿಗಳ ವಿರುದ್ಧ ರೈತರು ಗರಂ..!

ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ ಕೃಷಿ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಅಕ್ರೋಶ ವ್ಯಕ್ತಪಡಿಸುತ್ತಾರೆಂಬ ಕಾರಣಕ್ಕೆ, ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ ಅಧಿಕಾರಿಗಳು, ಕೇವಲ 10 ನಿಮಿಷಗಳ ಅವಧಿಯಲ್ಲಿ ಕೇವಲ ಒಂದು ತೋಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿಂದ ತೆರಳಿದ್ದಾರೆ, ಕಾಟಚಾರಕ್ಕೆ ನಡೆದ ಜಿಲ್ಲಾಧಿಕಾರಿಗಳ ಬೆಳೆಹಾನಿ ಭೇಟಿ ಬಗ್ಗೆ ರೈತರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.

ಮಳೆಯಿಂದ ಬೆಳೆ ನಾಶವಾದ ತೋಟಗಳಿಗೆ ಜಿಲ್ಲಾಧಿಕಾರಿಗಳಾದ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸುವುದ್ದಾಗಿ ಹೇಳಿದ್ರು, ಅದರಂತೆ ಇಂದು ಬೆಳಗ್ಗೆ 9:30ಕ್ಕೆ ಕಸವನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದರು, ಜಿಲ್ಲಾಧಿಕಾರಿಗಳಿಗೆ ತಮ್ಮ ನೋವು ಹೇಳಲು ಸಾಕಷ್ಟು ರೈತರು ಗ್ರಾಮದಲ್ಲಿ ಕಾದಿದ್ದರು, ತಮಗಾಗಿ ಕಾದಿದ್ದ ರೈತರನ್ನ ಬಿಟ್ಟು ಗ್ರಾಮದ ಹೊರಗಿನ ಒಂದು ತೋಟಕ್ಕೆ ಭೇಟಿ ಕೆಲವೇ ಕ್ಷಣದಲ್ಲಿ ಅಲ್ಲಿಂದ ತೆರಳಿದ್ದಾರೆ, ಜಿಲ್ಲಾಧಿಕಾರಿಗಳಿಗೆ ಕಾದಿದ್ದ ರೈತರು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಾರೆ, ಇದರಿಂದ ಹೆದರಿದ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿ ರೈತರು ಭೇಟಿಯಾಗದಂತೆ ಮಾಡಿದ್ದಾರೆಂದು ತಮ್ಮ ಸಿಟ್ಟು ಹೊರ ಹಾಕಿದ ರೈತ ಅಂಬರೀಷ್.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

6 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

8 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

19 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

19 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

23 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

1 day ago